ಶಾಖಾ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಪ್ರಸನ್ನ ಕುಮಾರ್ ಅವರಿಗೆ ಲಕ್ಷ್ಮೀಪುರ ಗ್ರಾಮಸ್ಥರು, ಬ್ಯಾಂಕಿನ ಸಿಬ್ಬಂದಿಯಿಂದ ಸನ್ಮಾನ
ರಾಮನಗರ (hairamanagara.in) : ಕರ್ನಾಟಕ ಗ್ರಾಮೀಣ ಬ್ಯಾಂಕ್ ಲಕ್ಷ್ಮೀಪುರ ಶಾಖೆಯಲ್ಲಿ ಶಾಖಾ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಪ್ರಸನ್ನಕುಮಾರ್ ಅವರಿಗೆ ಲಕ್ಷ್ಮೀಪುರ ಗ್ರಾಮಸ್ಥರು ಬ್ಯಾಂಕಿನ ಸಿಬ್ಬಂದಿಗಳು ಸನ್ಮಾನಿಸಿ ಬೀಳ್ಕೊಟ್ಟರು.

ಈ ಸಂಧರ್ಭದಲ್ಲಿ ಲಕ್ಷ್ಮೀಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಿತಾ, ಶಾಖಾ ವ್ಯವಸ್ಥಾಪಕ ಮಹದೇವಸ್ವಾಮಿ, ಹಿರಿಯ ವ್ಯವಸ್ಥಾಪಕ ಪ್ರಕಾಶ್ ಭಟ್, ಮಂಡ್ಯ ಶಾಖಾಧಿಕಾರಿ ರಾಮಣ್ಣ, ರಾಮನಗರ ಶಾಖಾಧಿಕಾರಿ ರವೀಂದ್ರಕುಮಾರ್, ಅಂಬಟಿಚಂದ್ರಕುಮಾರ್, ಉಮೇಶ್ಚಂದ್ರು, ಗ್ರಾಮ ಪಂಚಾಯಿತಿ ಅಧಿಕಾರಿಗಳು, ಗ್ರಾಮದ ಮುಖಂಡರು ಸೇರಿದಂತೆ ಹಲವರು ಹಾಜರಿದ್ದರು.