ಕೊಲೆಗಡುಕರ ಪಕ್ಷ, ಜಾತಿ, ಧರ್ಮವನ್ನು ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಿ : ಸಿದ್ದರಾಮಯ್ಯ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡನೀಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹತ್ಯೆಯನ್ನು ಖಂಡಿಸಿದ್ದಾರೆ.
ಘಟನೆಯನ್ನು ಖಂಡಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಪೊಲೀಸರು ಪ್ರವೀಣ್ ನೆಟ್ಟಾರ್ ಹತ್ಯೆಗೆ ಕಾರಣರಾದ ಹಂತಕರನ್ನು ತಕ್ಷಣ ಕೊಲೆಗಡುಕರನ್ನು ಬಂಧಿಸಬೇಕು. ಊಹಾಪೋಹಗಳಿಂದ ಶಾಂತಿ-ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು ಎಂದು ಆಗ್ರಹಿಸಿದರು.
ಕೊಲೆಗಡುಕರ ಪಕ್ಷ, ಜಾತಿ, ಧರ್ಮವನ್ನು ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕು ಎಂದು ಸರ್ಕಾರವನ್ನ ಒತ್ತಾಯಿಸಿದ್ದಾರೆ.
ಸುಳ್ಯ ತಾಲ್ಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಕಳೆದ ನಾಲ್ಕೈದು ದಿನಗಳ ಅವಧಿಯಲ್ಲಿ ಮಸೂದ್ ಮತ್ತು ಪ್ರವೀಣ್ ಹತ್ಯೆಯಾಗಿದ್ದು ಅತ್ಯಂತ ನೋವಿನ ವಿಚಾರ ಎಂದು ತಿಳಿಸಿದರು.

Leave a Reply

Your email address will not be published. Required fields are marked *