ಅವರ (ಡಿ.ಕೆ. ಶಿವಕುಮಾರ್) ಖೆಡ್ಡಾ ಅವರೇ ತೋಡಿಕೊಂಡಿದ್ದಾರೆ ; ನಾವೇನು‌ ಮಾಡುವ ಅಗತ್ಯ ಇಲ್ಲ : ಡಾ.ಸಿ.ಎನ್. ಅಶ್ವತ್ಥ ನಾರಾಯಣ

ರಾಮನಗರ : ಅವರ (ಡಿ.ಕೆ. ಶಿವಕುಮಾರ್) ಖೆಡ್ಡಾ ಅವರೇ ತೋಡಿಕೊಂಡಿದ್ದಾರೆ. ನಾವೇನು‌ ಮಾಡುವ ಅಗತ್ಯ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.
ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಗಾಳಿಪಟ ಉತ್ಸವಕ್ಕೆ ಚಾಲನೆ ನೀಡಿದ ಸಂದರ್ಭದಲ್ಲಿ ‘ನನ್ನನ್ನು ಮತ್ತೆ ಇ.ಡಿ. ಬಲೆಗೆ ಸಿಲುಕಿಸಲಾಗುತ್ತಿದೆ’ ಎಂದು
ಡಿ.ಕೆ. ಶಿವಕುಮಾರ್ ಅವರ ಆರೋಪದ ಕುರಿತು ಮಾತನಾಡಿದ ಅವರು ಭ್ರಷ್ಟಾಚಾರ ಡಿಕೆಶಿ‌ ಸಂಸ್ಕೃತಿ. ಕನಕಪುರದಲ್ಲಿ ಖಂಡಿತ ಅದನ್ನು ಕ್ಲೀನ್ ಮಾಡುತ್ತೇವೆ. ಈ ಬಗ್ಗೆ ಅನುಮಾನ ಬೇಡ ಎಂದು ತಿಳಿಸಿದರು.
ಪಿಎಫ್‌ಐ, ಎಸ್‌ಡಿಪಿಐ ನಿಷೇಧಿಸುವಂತೆ ಕಾಂಗ್ರೆಸ್‌ ಒತ್ತಾಯದ ಕುರಿತು ಪ್ರತಿಕ್ರಿಯಿಸಿದ ಸಚಿವರು ‘ ಈ ಬಗ್ಗೆ ಮಾತನಾಡಲು ಕಾಂಗ್ರೆಸ್‌ ಗೆ ನೈತಿಕತೆ ಇಲ್ಲ. ಅವರ ತುಷ್ಟೀಕರಣ ರಾಜಕಾರಣವೇ ಇದಕ್ಕೆಲ್ಲ‌ ಕಾರಣ. ಅವರಿಗೂ ದೇಶದ್ರೋಹಿಗಳಿಗೂ ವ್ಯತ್ಯಾಸ ಇಲ್ಲ ಎಂದು ತಿಳಿಸಿದರು.
ಮಂಗಳೂರಿನಲ್ಲಿ ಅಮಾಯಕರ ಹತ್ಯೆ ಮಾಡಿದ ಆರೋಪಿಗಳ ವಿರುದ್ಧ ಎನ್‌ಕೌಂಟರ್ ಸೇರಿದಂತೆ ಯಾವುದೇ ಕಠಿಣ ಕ್ರಮಕ್ಕೆ ಸರ್ಕಾರ ಸಿದ್ಧವಿದೆ. ಯಾವ ಕಾರಣಕ್ಕೂ ಕೊಲೆ ಗಡುಕರು, ದುಷ್ಕರ್ಮಿಗಳನ್ನು ರಕ್ಷಿಸುವ ಪ್ರಶ್ನೆ ಇಲ್ಲ. ಈಗಾಗಲೇ ತನಿಖೆಗೆ ತಂಡಗಳನ್ನು ರಚಿಸಲಾಗಿದೆ. ಅಮಾಯಕರ ಜೀವ ರಕ್ಷಣೆ ನಮ್ಮ‌ ಕರ್ತವ್ಯ ಎಂದು ತಿಳಿಸಿದರು.
ಬಿಜೆಪಿ ಕಾರ್ಯಕರ್ತರ ಆಕ್ರೋಶ ಈ ಸಂದರ್ಭದಲ್ಲಿ ಸಹಜ. ಈಗಾಗಲೇ ಸಂಬಂಧಿಸಿದವರನ್ನು ಬಂಧಿಸಲಾಗಿದೆ. ಸರ್ಕಾರ ಹಾಗೂ ಗೃಹ ಸಚಿವರು ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜನರ ಭಾವನೆಗಳಿಗೆ ಪೂರಕವಾಗಿ ಕಾರ್ಯ ನಿರ್ವಹಿಸುತ್ತೇವೆ. ಯು.ಪಿ. ಮಾದರಿ ಅಲ್ಲ, ಅದಕ್ಕಿಂತ ಐದು ಹೆಜ್ಜೆ ಮುಂದೆ ಹೋಗಿ ಕ್ರಮ ಕೈಗೊಳ್ಳುತ್ತೇವೆ. ಅದರಲ್ಲೂ ಯಾವುದೇ ಮುಲಾಜು ಇಲ್ಲ ಎಂದರು.

“ಹಾಯ್ ರಾಮನಗರ” ಡಿಜಿಟಲ್ ನ್ಯೂಸ್ ವಾಟ್ಸ್ ಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ :

https://chat.whatsapp.com/HK9U7zQD11W79PK8sGwVCS

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ :

WhatsApp : 9880439669

Mail : rudresh.444@gmail.com

Leave a Reply

Your email address will not be published. Required fields are marked *