ಹಾವು ಕಚ್ಚಿ ನಾಗೋಹಳ್ಳಿ ನಿವಾಸಿ ಆಶಾರಾಣಿ ಸಾವು

ರಾಮನಗರ : ತಾಲ್ಲೂಕಿನ ಕೈಲಾಂಚ ಹೋಬಳಿಯ ನಾಗೋಹಳ್ಳಿ ಗ್ರಾಮದಲ್ಲಿ ಹಾವು ಕಚ್ಚಿ ಆಶಾ ರಾಣಿ (33) ಎಂಬ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ.

ಮನೆ ಹಿತ್ತಲಿನ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂಧರ್ಭದಲ್ಲಿ ವಿಷದ ಹಾವು ಕಚ್ಚಿದೆ ಕಚ್ಚಿದ ಸಂಧರ್ಭದಲ್ಲಿ ನೋವು ಭಯದಿಂದ ಕಿರುಚಿ ಹಿತ್ತಲಿನಿಂದ ಮನೆ ಮುಂಭಾಗ ಓಡಿ ಬಂದಿದ್ದಾರೆ ಕೂಡಲೇ ಅಕ್ಕಪಕ್ಕದ ಜನರು ವಾಹನದಲ್ಲಿ ಕೈಲಾಂಚ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ವೈದ್ಯರು ಸಿಗದ ಹಿನ್ನಲೆಯಲ್ಲಿ ರಾಮನಗರ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ತಂದಿದ್ದಾರೆ.

ಆದರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆಶಾರಾಣಿ ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *